ಕುವೆಂಪು
ರಸ ಋಷಿ, ಭಾರತೀಯ ಕವಿ, ನಾಟಕಕಾರ, ಚಿಂತಕ / From Wikipedia, the free encyclopedia
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪[1] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು.
Quick Facts ಕುವೆಂಪು, ಜನನ ...
ಕುವೆಂಪು | |
---|---|
ಜನನ | ಡಿಸೆಂಬರ್ ೨೯, ೧೯೦೪ ಹಿರೇಕೊಡಿಗೆ, ಕೊಪ್ಪ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ |
ಮರಣ | ನವೆಂಬರ್ 11, 1994 ಮೈಸೂರು, ಕರ್ನಾಟಕ, ಭಾರತ |
ಅಂತ್ಯ ಸಂಸ್ಕಾರ ಸ್ಥಳ | ಕುಪ್ಪಳಿ, ಶಿವಮೊಗ್ಗ ಜಿಲ್ಲೆ |
ಕಾವ್ಯನಾಮ | ಕುವೆಂಪು |
ವೃತ್ತಿ | ಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ, ಕುಲಪತಿ |
ರಾಷ್ಟ್ರೀಯತೆ | ಭಾರತೀಯ |
ಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆ | ಮೈಸೂರು ವಿಶ್ವವಿದ್ಯಾನಿಲಯ |
ಕಾಲ | 20ನೆಯ ಶತಮಾನ |
ಪ್ರಕಾರ/ಶೈಲಿ | ಸಣ್ಣಕತೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ, ಆತ್ಮಕಥೆ, ಜೀವನ ಚರಿತ್ರೆ, ಮಹಾಕಾವ್ಯ |
ವಿಷಯ | ನುಡಿ, ನಾಡೊಲವು, ಪ್ರಕೃತಿ, ಅಧ್ಯಾತ್ಮ, ವಿಚಾರ |
ಸಾಹಿತ್ಯ ಚಳುವಳಿ | ನವೋದಯ |
ಪ್ರಮುಖ ಪ್ರಶಸ್ತಿ(ಗಳು) | ಜ್ಞಾನಪೀಠ ಪ್ರಶಸ್ತಿ, ಪದ್ಮ ವಿಭೂಷಣ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ಪಂಪ ಪ್ರಶಸ್ತಿ |
ಬಾಳ ಸಂಗಾತಿ | ಹೇಮಾವತಿ |
ಮಕ್ಕಳು | ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ |
ಸಂಬಂಧಿಗಳು | ಚಿದಾನಂದ ಗೌಡ |
ಪ್ರಭಾವಗಳು
| |
ಪ್ರಭಾವಿತರು | |
ಸಹಿ | |
www |
Close
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.