ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆhdhdhd ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು 'ಅಣೆಕಟ್ಟುಗಳು ಆಧುನಿಕ ಭಾರತದ ನವ ದೇಗುಲಗಳು' ಎಂದು ಬಣ್ಣಿಸಿದ್ದರು. ಇತ್ತೀಚಿನ ಮಾಹಿತಿಯಂತೆ ಭಾರತದಲ್ಲಿ ಸುಮಾರು 3200 ಅಣೆಕಟ್ಟು, ಬ್ಯಾರೇಜ್ಗಳಿವೆ. ಸಟ್ಲೆಜ್ ನದಿಗೆ ಅಡ್ಡವಾಗಿ ನಿರ್ಮಿಸಿರುವ ಭಾಕ್ರಾ ಅಥವಾ ಗೋವಿಂದ ಸಾಗರ ಅಣೆಕಟ್ಟು ಸ್ವತಂತ್ರ ಭಾರತದ ಮೊದಲ ಅಣೆಕಟ್ಟು. 225.55 ಮೀಟರ್ ಎತ್ತರದ (518.25 ಮೀಟರ್ ಅಗಲ) ಇದು ದೇಶದ ಎರಡನೇ ಅತಿದೊಡ್ಡ ಅಣೆಕಟ್ಟು ಕೂಡ. 260 ಮೀಟರ್ ಎತ್ತರ, 575 ಮೀಟರ್ ಅಗಲದ ತೆಹ್ರಿ ಅಣೆಕಟ್ಟು ಭಾರತದ ಮೊದಲ ದೊಡ್ಡ ಅಣೆಕಟ್ಟು. ಇದು ಉತ್ತರಾಖಂಡದಲ್ಲಿದ್ದು ಭಾಗೀರಥಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ.
ಕೆಆರ್ಎಸ್ ಎಂದು ಸಂಕ್ಷಿಪ್ತವಾಗಿ ಹೇಳಲಾಗುವ ಕೃಷ್ಣರಾಜ ಸಾಗರಕರ್ನಾಟಕದ ಮೊದಲ ಅಣೆಕಟ್ಟು. ಇದು ಸರ್ ಎಂ.ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಮತ್ತು ಶ್ರೀನಾಲ್ಮಡಿ ಕೃಷ್ಣರಾಜ ಒಡೆಯರ್ ಅವರ ಪ್ರೊತ್ಸಾಹದಿಂದ ಆದುದು. ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಿರುವ ಅಣೆಕಟ್ಟು 1932ರಲ್ಲಿ ಕಾರ್ಯಾರಂಭ ಮಾಡಿತು. ಇದರ ಎತ್ತರ 124.80 ಅಡಿ. ಉದ್ದ 3.5 ಕಿ.ಮೀಟರ್.